ಕಿಲ್ಲಿಂಗ್ ಸ್ಟಾರ್ ಗೆ ಬೆಂಗಳೂರಲ್ಲಿ ಚಿಕಿತ್ಸೆ: ನಟ ದರ್ಶನ್ ಫೋಟೋ ವೈರಲ್!

0
Spread the love

ಬೆಂಗಳೂರು:- ಇತ್ತೀಚೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು.

Advertisement

ಅಲ್ಲದೇ ಇದೇ ಕಾರಣದಿಂದ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಕೋರ್ಟ್ ಗೆ ಮನವಿ ಮಾಡಿ ಬೇಲ್ ಮೇಲೆ ಹೊರಗೆ ಬಂದಿದ್ದಾರೆ.

6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಕಳೆದ 4 ವಾರಗಳಿಂದ ಬಿಜಿಎಸ್‌ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ನಟ ದರ್ಶನ್‌ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಇದೀಗ ಭಾರೀ ವೈರಲ್ ಆಗಿದೆ.

ಇನ್ನೂ ಮತ್ತೊಂದೆಡೆ ರೆಗ್ಯೂಲರ್‌ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ನಡುವೆ ದರ್ಶನ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ.

ತುರ್ತು ಚಿಕಿತ್ಸೆಗಾಗಿಯೇ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆಗಾಗಿಯೇ ದರ್ಶನ್ ಬೆಂಗಳೂರಿಗೆ ಬಂದು 32 ದಿನಗಳು ಮುಗಿದು ಹೋಗಿವೆ. ಇನ್ನೂ 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಅಷ್ಟರಲ್ಲಿ ರೆಗ್ಯೂಲರ್‌ ಬೇಲ್‌ ಸಿಕ್ಕರೆ ದರ್ಶನ್‌ ಸೇಫ್‌ ಅಂತ ಹೇಳಲಾಗ್ತಿದೆ.


Spread the love

LEAVE A REPLY

Please enter your comment!
Please enter your name here