ಬೆಳಗಾವಿ:- ತಾಲ್ಲೂಕಿನ ಬಡಲಾ ಅಂಕಲಗಿ ಗ್ರಾಮದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದ ಕೌರಿ ಗುಡ್ಡದಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣದ ಹೆಸರಿನಲ್ಲಿ ಸಾವಿರಾರು ಮರಗಳ ಮಾರಣಹೋಮವೇ ನಡೆದಿದೆ.
ಕಳೆದ ಒಂದೂವರೆ ತಿಂಗಳಿಂದ 40 ಎಕರೆಗೂ ಹೆಚ್ಚು ಪ್ರದೇಶವನ್ನು ಅಗೆದು ಹಾಳು ಮಾಡಲಾಗಿದೆ. ಈ ಗುಡ್ಡದಲ್ಲಿ ಶ್ರೀಗಂಧ, ತೇಗು, ವಿವಿಧ ಹಣ್ಣಿನ ಮರಗಳು, ಮತ್ತು ನವಿಲು ಸೇರಿದಂತೆ ಹಲವು ಪ್ರಾಣಿ-ಪಕ್ಷಿಗಳು ವಾಸಿಸುತ್ತಿದ್ದರೂ, ಅರಣ್ಯ ಇಲಾಖೆಯಿಂದ ಅನುಮತಿ ಸಿಗದೆ ಇಂತಹ ಹಾನಿ ನಡೆಯುತ್ತಿದೆ. ಸ್ಥಳೀಯ ರೈತರು ತಡೆಗಟ್ಟಲು ಪ್ರಯತ್ನಿಸಿದಾಗ ಜೆಸಿಬಿ ಬಳಸಿ ಮರಗಳನ್ನು ಕಟ್ ಮಾಡುವ ಕಾರ್ಯ ಮುಂದುವರಿಸಿದ್ದು ಅಲ್ಲದೇ, ಅವರಿಗೆ ಬೆದರಿಕೆ ಕೂಡ ಹಾಕಿದ್ದಾರೆ.
ಸ್ಥಳಕ್ಕೆ ಅರಣ್ಯ ಮತ್ತು ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕಟಾವು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.



