
ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದ ನಿವಾಸಿ, ಮಾಜಿ ಸೈನಿಕ ಭೀಮಪ್ಪ ಎಮ್ಮಿ ತಮ್ಮ 61ನೇ ವಯಸ್ಸಿನಲ್ಲಿ ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ. ಗದಗ ಜಿಲ್ಲಾ ಮಾಜಿ ಸೈನಿಕರ ಸಂಘ ಹಾಗೂ ಕೂಪ್ಪಳ ಜಿಲ್ಲಾ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ರಾಷ್ಟ್ರಧ್ವಜದೊಂದಿಗೆ ಗೌರವವನ್ನು ಸಮರ್ಪಿಸಲಾಯಿತು.
Advertisement
ಮಾರುತಿ ಗೊಂದಿ, ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಹಿರಿಯರಾದ ಎಸ್.ಜಿ. ಕಲ್ಲಳ್ಳಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸಿದ್ದಯ್ಯ ಹಿರೇಮಠ, ವೀರಪ್ಪ ಬಿಂಗಿ, ಶರಣಪ್ಪ ಮಡಿವಾಳ, ವಿಜಯ ಗಾಜಿ, ವಿಜಯಕುಮಾರ ಬಡಿಗೇರ, ನಾಗರಾಜ್ ಹಂಚಿನಾಳ, ರೈತ ಸಂಘ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ, ಶರಣಪ್ಪ ಜೋಗಿನ, ಮಲ್ಲಿಕಾರ್ಜುನ್ ಇದ್ಲಿ, ರಾಮಣ್ಣ ಕುರುಡಗಿ ಮುಂತಾದವರು ಪಾಲ್ಗೊಂಡಿದ್ದರು.