ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಹೇಳಿದ್ದೇನು?

0
Spread the love

ಬೆಂಗಳೂರು:- ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಸ್ಪಷ್ಟನೆ ಕೊಟ್ಟಿದೆ.

Advertisement

ಘಟನೆ ಬಗ್ಗೆ ಕೆಂಪೇಗೌಡ ಏರ್​​ಪೋರ್ಟ್​ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಏ.18ರ ಮಧ್ಯಾಹ್ನ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಂಟ್ರ್ಯಾಕ್ಟ್ ಏಜೆನ್ಸಿ ಕಡೆಯ ಚಾಲಕ ಟಿಟಿ ವಾಹನವನ್ನು ಚಲಾಯಿಸಿಕೊಂಡು ಕೆಟ್ಟು ನಿಂತಿದ್ದ ವಿಮಾನದ ಬಳಿ ಬಂದಿದ್ದು, ಫ್ಲೈಟ್​​ಗೆ ಟಿಟಿ ವಾಹನದ ಮೇಲ್ಭಾಗ ತಗುಲಿ ಡ್ಯಾಮೇಜ್ ಆಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ತಕ್ಷಣ ನಮ್ಮ ಸಿಬ್ಬಂದಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಕುರಿತು ಈಗಾಗಲೇ ಡಿಜಿಸಿಎಗೆ ಮಾಹಿತಿ ರವಾನಿಸಿದ್ದೇವೆ. ಪ್ರಯಾಣಿಕರಿಗೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆಯಾಗಿಲ್ಲ. ಪ್ರಯಾಣಿಕರು, ಸಿಬ್ಬಂದಿ, ಏರ್​​​​ಲೈನ್ಸ್​​ನ ಸುರಕ್ಷತೆ ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

LEAVE A REPLY

Please enter your comment!
Please enter your name here