ತುಮಕೂರು: ಹೃದಯಾಘಾತದಿಂದ ಹತ್ತನೇ ತರಗತಿ ವಿದ್ಯಾರ್ಥಿ ಸಾವು!

0
Spread the love

ತುಮಕೂರು: ಮನುಷ್ಯನಿಗೆ ಸಾವು ಯಾವ ಸಮಯದಲ್ಲಿ ಬರುತ್ತೆ ಅಂತ ಹೇಳೋದಕ್ಕೆ ಆಗೋದಿಲ್ಲ. ವಯಸ್ಸಾಗಿದ್ದ ಸಾವು ಬರೋದು ಸಾಮಾನ್ಯ. ಆದ್ರೆ, ಇತ್ತೀಚೆಗೆ ಚಿಕ್ಕಮಕ್ಕಳಿಗೂ ಹಾರ್ಟ್‌ ಅಟ್ಯಾಕ್‌ ಆಗುತ್ತಿದೆ. ಇದೀಗ ಹೃದಯಾಘಾತದಿಂದ ಹತ್ತನೆ ತರಗತಿ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.

Advertisement

ರಾಹುಲ್ (16), ಮೃತ ವಿದ್ಯಾರ್ಥಿಯಾಗಿದ್ದು, ತಾಲೂಕಿನ ಭೈರಾಪುರದ ಜಯರಾಂ ಎಂಬುವರ ಮಗ ರಾಹುಲ್, ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9.30ರಲ್ಲಿ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ.

ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ರಾತ್ರಿ 10 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದ್ದಾನೆ. ಪೋಷಕರಲ್ಲಿ ಆಕ್ರಂಧನ ಮುಗಿಲು ಮುಟ್ಟಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here