ತುಮಕೂರು: ಮಲಗಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ವೀರಚಿನ್ನೇನಹಳ್ಳಿಯಲ್ಲಿ ನಡೆದಿದೆ. ರಾಜು (40) ಕೊಲೆಯಾದ ವ್ಯಕ್ತಿಯಾಗಿದ್ದು,
Advertisement
ಇಂದು ಬೆಳಗಿನಜಾವ 4.30ರ ವೇಳೆಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಾಲಿಗೆ ಟವೆಲ್ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಂದಿದ್ದಾರೆ.
ಮೂರು ಜನರಿಂದ ನಡೆದಿರುವ ಕೃತ್ಯ ಎನ್ನಲಾಗಿದ್ದು, ಯಾವ ಕಾರಣಕ್ಕೆ ಕೊಲೆ ನಡೆದಿದೆ, ಕೊಲೆ ಮಾಡಿದವರ್ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.