ತುಮಕೂರು:- ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ನವಜಾತ ಹೆಣ್ಣು ಶಿಶುವನ್ನ ಬೇಲಿಯಲ್ಲಿ ಬಿಸಾಕಿ ಪಾಪಿಗಳು ಎಸ್ಕೇಪ್ ಆಗಿರುವ ಘಟನೆ ಜರುಗಿದೆ.
Advertisement
ಯಾರೋ ದುಷ್ಟರು ನವಜಾತ ಹೆಣ್ಣುಮಗುವನ್ನ ಬೇಲಿಯ ಬಳಿ ಬಿಸಾಡಿ ಎಸ್ಕೇಪ್ ಆಗಿದ್ದು, ಬೇಲಿಯ ಬಳಿ ಅಳುತ್ತಿದ್ದ ನವಜಾತ ಶಿಶುವನ್ನು ಕುರಿಗಾಹಿಗಳು ನೋಡಿ ರಕ್ಷಣೆ ಮಾಡಿದ್ದಾರೆ. ಕೂಡಲೇ ಕಳ್ಳಂಬೆಳ್ಳ ಪೊಲೀಸರಿಗೆ ಕುರಿಗಾಹಿಗಳು ಮಾಹಿತಿ ಕೊಟ್ಟಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಅಲ್ಲದೇ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಗೆ ಮಗುವನ್ನ ಒಪ್ಪಿಸಿದ್ದಾರೆ. ಘಟನೆ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.