HomeKarnataka Newsತುಂಗಭದ್ರಾ ಎಡದಂಡೆ ಕಾಲುವೆ ಒಡೆದ ವಿಚಾರ: ರೈತರಿಗೆ ಗುಡ್ ನ್ಯೂಸ್, ದುರಸ್ತಿ ಕಾರ್ಯ ಆರಂಭ!

ತುಂಗಭದ್ರಾ ಎಡದಂಡೆ ಕಾಲುವೆ ಒಡೆದ ವಿಚಾರ: ರೈತರಿಗೆ ಗುಡ್ ನ್ಯೂಸ್, ದುರಸ್ತಿ ಕಾರ್ಯ ಆರಂಭ!

For Dai;y Updates Join Our whatsapp Group

Spread the love

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ಒಡೆದ ಪರಿಣಾಮ ಬೆಳೆ ಹಾಗೂ ಜಮೀನು ಹಾನಿಗೊಳಗಾದ ರೈತರಿಗೆ ಸರ್ಕಾರ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ.

ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕಾಲುವೆ ದುರಸ್ತಿ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ನೀರಿನ ಪೂರೈಕೆ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಸುತ್ತಮುತ್ತ ರೈತರು ಬೆಳೆದಿದ್ದ ಭತ್ತದ ಬೆಳೆ ಸಂಪೂರ್ಣ ನಾಶವಾಗಿದ್ದು, ಜಮೀನಿನಲ್ಲಿ ಮರಳು ಮತ್ತು ಕಲ್ಲು ತುಂಬಿಕೊಂಡು ಗದ್ದೆಗಳು ಹಾಳಾಗಿವೆ. ಇದರಿಂದ ಆಕ್ರೋಶಗೊಂಡ ರೈತರು, ಕಾಲುವೆ ದುರಸ್ತಿ ಕಾಮಗಾರಿಗೆ ಬಂದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಪರಿಹಾರ ನೀಡದೇ ಕಾಮಗಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಇದಾದ ಬಳಿಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎರಡು ದಿನಗಳ ಕಾಲ ಸಭೆ ನಡೆಸಿ ರೈತರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಇಂದಿನಿಂದ ದುರಸ್ತಿ ಕಾರ್ಯಗಳು ಆರಂಭಗೊಂಡಿವೆ. ಸದ್ಯ ತಾತ್ಕಾಲಿಕವಾಗಿ ಸ್ಯಾಂಡ್ ಬ್ಯಾಗ್‌ಗಳನ್ನು ಬಳಸಿ ಕಾಲುವೆ ದುರಸ್ತಿ ಮಾಡಲಾಗುತ್ತಿದೆ.

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು ಮತ್ತು ರೈತರಿಂದ ಮಾಹಿತಿ ಪಡೆದರು. ಕಳೆದ ನಾಲ್ಕು ತಿಂಗಳಿಂದ ಕಾಲುವೆಯಲ್ಲಿ ಸಮಸ್ಯೆ ಇದ್ದರೂ ಸರಿಯಾದ ನಿರ್ವಹಣೆ ಆಗದ ಕಾರಣ ಈ ಘಟನೆ ಸಂಭವಿಸಿದೆ ಎಂದು ರೈತರು ಸಚಿವರ ಎದುರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಈಗಾಗಲೇ 92 ರೈತರು ಬೆಳೆ ಕಳೆದುಕೊಂಡಿರುವುದು ಗುರುತಿಸಲಾಗಿದ್ದು, ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ನಿಗದಿ ಮಾಡಿ ವಿತರಿಸಲಾಗುವುದು ಎಂದು ಹೇಳಿದರು. ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇನ್ನು ಎರಡರಿಂದ ಮೂರು ದಿನಗಳಲ್ಲಿ ತಾತ್ಕಾಲಿಕವಾಗಿ ಕಾಲುವೆ ದುರಸ್ತಿ ಪೂರ್ಣಗೊಳಿಸಿ, ಸುಮಾರು 2 ಸಾವಿರ ಕ್ಯೂಸೆಕ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಹರಿಸಲಾಗುವುದು. ಬಳಿಕ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ನಡುವೆ, ರೈತರಿಗೆ ಪರಿಹಾರ ಶೀಘ್ರ ನೀಡಬೇಕು ಹಾಗೂ ಕಾಲುವೆ ಶಾಶ್ವತ ದುರಸ್ತಿ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಬೇಕು ಎಂಬ ಒತ್ತಾಯ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!