HomeCrime Newsಬೆಂಗಳೂರಿನಲ್ಲಿ GST ಅಧಿಕಾರಿಗಳ ಸೋಗಿನಲ್ಲಿ 5 ಲಕ್ಷ ಸುಲಿಗೆ: ಇಬ್ಬರು ಅರೆಸ್ಟ್

ಬೆಂಗಳೂರಿನಲ್ಲಿ GST ಅಧಿಕಾರಿಗಳ ಸೋಗಿನಲ್ಲಿ 5 ಲಕ್ಷ ಸುಲಿಗೆ: ಇಬ್ಬರು ಅರೆಸ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಲಾಖೆಯ ಅಧಿಕಾರಿಗಳಂತೆ ನಟಿಸಿ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಾಗರಾಜ್ ಹಾಗೂ ದಾದಾಪೀರ್ ಎಂದು ಗುರುತಿಸಲಾಗಿದೆ. ಇವರು ಬನಶಂಕರಿಯಲ್ಲಿರುವ ಜಿಎಸ್‌ಟಿ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಲ್‌ಟಿಎಸ್ ಹಾಗೂ ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಐಡಿ ಕಾರ್ಡ್‌ಗಳನ್ನು ತಯಾರಿಸಿಕೊಂಡಿದ್ದ ಆರೋಪಿಗಳು, ಜನವರಿ 10ರಂದು ಪೀಣ್ಯದಲ್ಲಿರುವ ಒಬ್ಬ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ 5 ಲಕ್ಷ ರೂಪಾಯಿ ವಸೂಲಿ ಮಾಡಿದ್ದರು ಎಂದು ತಿಳಿದುಬಂದಿದೆ.

ಆರೋಪಿಗಳ ಚಟುವಟಿಕೆ ಬಗ್ಗೆ ಅನುಮಾನಗೊಂಡ ಕಚೇರಿ ಅಧಿಕಾರಿಗಳು ಫೆಬ್ರವರಿ 17ರಂದು ಅವರು ವಾಸವಿದ್ದ ಕಚೇರಿಯ ಕೊಠಡಿಯಲ್ಲಿ ತಪಾಸಣೆ ನಡೆಸಿದರು. ಈ ವೇಳೆ ನಕಲಿ ಐಡಿ ಕಾರ್ಡ್‌ಗಳು ಹಾಗೂ ಸರ್ಚ್ ವಾರೆಂಟ್ ಪ್ರತಿಗಳು ಪತ್ತೆಯಾಗಿವೆ.

ತಕ್ಷಣ ಜಿಎಸ್‌ಟಿ ಅಧಿಕಾರಿಗಳು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!