ಲಂಚ ಸ್ವೀಕಾರ: ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿ ಇಂಜಿನಿಯರ್​ಗಳು!

0
Spread the love

ಬೆಂಗಳೂರು:- ಎನ್ಒಸಿ ನೀಡಲು ವ್ಯಕ್ತಿಯೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬಿಬಿಎಂಪಿ ಇಂಜಿನಿಯರ್​ಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಲೋಕಾ ಬಲೆಗೆ ಬಿದ್ದವರನ್ನು ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್​ಎಂವಿ ಉಪ ವಿಭಾಗದ ಎಇ ಸುರೇಂದ್ರ ಎಂದು ಗುರುತಿಸಲಾಗಿದೆ.

Advertisement

ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚ ನೀಡುವಂತೆ ಬಿಬಿಎಂಪಿ ಇಂಜಿನಿಯರ್​ಗಳು ಬೇಡಿಕೆ ಇಟ್ಟಿದ್ದರು. ಸಂಜಯ್ ಎಂಬುವರಿಂದ ಮುಂಗಡವಾಗಿ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳಿಂದ ಲಂಚದ ಹಣವನ್ನು ಲೋಕಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here