ಮಂಡ್ಯ:- ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇಶಹಳ್ಳಿ ಗ್ರಾಮದ ಮದ್ದೂರಮ್ಮನ ಕೆರೆಯಲ್ಲಿ ಜರುಗಿದೆ.
17 ವರ್ಷದ ರಂಜು ಹಾಗೂ 14 ವರ್ಷದ ಮುತ್ತುರಾಜು ಮೃತ ಬಾಲಕರು ಎನ್ನಲಾಗಿದೆ. ಕೆರೆಯಲ್ಲಿ ಈಜುಲು ಹೋಗಿ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಕೆರೆಯಲ್ಲಿ ಈಜಲು ಐವರು ಸ್ನೇಹಿತರು ತೆರಳಿದ್ದರು. ಈ ವೇಳೆ ಈಜು ಬಾರದೇ ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ, ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಇನ್ನೂ ರಾಜು ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



