ಬಾವಿಗೆ ಬಿದ್ದು ಎರಡು ಎತ್ತುಗಳು ದುರ್ಮರಣ: ಮುಗಿಲು ಮುಟ್ಟಿದ ರೈತನ ಆಕ್ರಂದನ!

0
Spread the love

ವಿಜಯಪುರ :- ಬಾವಿಗೆ ಬಿದ್ದು ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೋಲಾರ ತಾಲೂಕಿನ ಕವಲಗಿ ಗ್ರಾಮದ ಬಳಿ ಜರುಗಿದೆ.

Advertisement

ತೋಟದಲ್ಲಿದ್ದ ಒಣ ಮೇವನ್ನ ಜೋಡೆತ್ತಿನ ಬಂಡಿಯಲ್ಲಿ ರೈತನು ಮನೆಗೆ ತರುವ ಸಂದರ್ಭದಲ್ಲಿ ನಾಯಿ ಅಡ್ಡ ಬಂದ ಪರಿಣಾಮ, ಬೆದರಿದ ಎತ್ತುಗಳು ಬಂಡಿ ಸಮೇತ ಪಕ್ಕದ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ತನ್ನ ಕೃಷಿ ಕಾರ್ಯಕ್ಕೆ ಬೆನ್ನಲುಬಾದ ಜೋಡೆತ್ತುಗಳನ್ನ ಕಳೆದುಕೊಂಡ ರೈತ ರಾಮಣ್ಣ ದಳವಾಯಿ ಕಣ್ಣಿರು ಹಾಕುವಂತಾಗಿದೆ.

ರೈತನಿಗೆ ಸರ್ಕಾರವಾಗಲಿ, ಜನಪ್ರತಿನಿಧಿಗಳಾಗಲಿ ಸಹಾಯ ಹಸ್ತ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊಲ್ಹಾರ ತಹಶೀಲ್ದಾರ ಹಾಗೂ ಪಿಎಸ್ಐ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here