ದಾವಣಗೆರೆ: ಲಂಚ ಪಡೆಯುವ ವೇಳೆ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾದ ನಾಗೇಶ್ , ಕಂದಾಯ ಅಧಿಕಾರಿ ರಮೇಶ.ಯು ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಗಳಾಗಿದ್ದು, ಸುಮಾರು 3-4 ವರ್ಷಗಳ ಕಂದಾಯ ಪಾವತಿ ಬಾಕಿ ಇಟ್ಟಿದ್ದ ಮಾಲೀಕನಿಗೆ 1,39,400/- ರಲ್ಲಿ ಕಡಿಮೆ ಮಾಡಿ, ಉಳಿದ ಹಣದಲ್ಲಿ ಶೇಕಡ 50% ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸುಮಾರು 50-60 ಸಾವಿರ ರೂಗಳ ಮೊತ್ತವನ್ನು ನೀಡುವಂತೆ ಹೇಳಿದ್ದರು.
ಆದ್ದರಿಂದ ಹಾವೇರಿ ಜಿಲ್ಲೆ ರಾಣಿಬೆನ್ನೂರಿನ ರಾಜು ಲಕ್ಷ್ಮಣ್ ಕಾಂಬ್ಳೆಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಈ ಸಂಬಂಧ ದಾವಣಗೆರೆ ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಲೋಕಾಯುಕ್ತ ಪೊಲೀಸರ ಖೆಡ್ಡಾ ಗೆ ಬೀಳುವಂತೆ ಮಾಡಿದ್ದಾರೆ. ದೂರುದಾರರಿಂದ 20,000/- ರೂ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಲಾಕ್ ಆಗಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.