ಧಾರವಾಡ: ಹಾಸನದಲ್ಲಿ ಹೃದಯಾಘಾತದ ಮರಣ ಮೃದಂಗ ನಿಲ್ಲದಾಗಿದ್ದು ಇದು ಬೇರೆ ಜಿಲ್ಲೆಗಳಲ್ಲೂ ಆತಂಕ ಮೂಡಿಸಿದೆ. ಈ ನಡುವೆ ಧಾರವಾಡ ಜಿಲ್ಲೆಯಲ್ಲಿ ಕೂಡ ಹೃದಯಾಘಾತದ ಪ್ರಕರಣಗಳು ಆರಂಭವಾಗಿದೆ. ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.
ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ (45) ಮೃತ ದುರ್ಧೈವಿಗಳಾಗಿದ್ದು,
ಸೋಮವಾರ ರಾತ್ರಿ ಇಬ್ಬರು ಕೂಡ ಮಲಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ



