ವಾಟೆಹೊಳೆ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲು!

0
Spread the love

ಕಾರವಾರ:- ವಾಟೆಹೊಳೆ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದ ಸಮೀಪದಲ್ಲಿ ಜರುಗಿದೆ.

Advertisement

ನೀರುಪಾಲಾದವರನ್ನು ಶಿರಸಿ ಮೂಲದ ಸುಹಾಸ್ ಶಟ್ಟಿ, ಹಾಗೂ ಅಕ್ಷಯ್ ಭಟ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದ ವಾಟೆಹೊಳೆ ಜಲಪಾತ ವೀಕ್ಷಣೆಗೆ ಎಂದು 6 ಜನ ಸ್ನೇಹಿತರ ಜೊತೆ ಬಂದಿದ್ದರು. ಫಾಲ್ಸ್​ ವೀಕ್ಷಣೆಯ ಭರದಲ್ಲಿ ಕಾಲು ಜಾರಿ ಇಬ್ಬರು ಬಿದ್ದಿದ್ದಾರೆ. 6 ಜನ ಸ್ನೇಹಿತರು ಬಿಕಾಂ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here