ಬೆಂಗಳೂರಿನಲ್ಲಿ ಸರಣಿ ಕಳ್ಳತನ ಮಾಡಿ ಕುಂಭಮೇಳಕ್ಕೆ ಹೋಗಿದ್ದ ಇಬ್ಬರು ಅಂದರ್!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಕಳ್ಳತನ ಮಾಡಿ ಕುಂಭಮೇಳಕ್ಕೆ ಹೋಗಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕಳೆದ ಫೆಬ್ರವರಿ 6ರಂದು ರಾತ್ರಿ ಅಂಗಡಿಗಳ ಶೆಟರ್‌ ಮುರಿದು ಸರಣಿ ಕಳ್ಳತನ ಮಾಡಿದ್ರು. ಬೇಕರಿ, ಮೆಡಿಕಲ್‌, ನಂದಿನಿ ಪಾರ್ಲರ್‌ ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನ ಮಾಡಿದ್ದರು.

ಈ ಸಂಬಂಧ ಕೆ.ಪಿ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರಿಗೆ ಕಳವು ಮಾಡಿದ್ದ ನಾಲ್ವರಲ್ಲಿ ಇಬ್ಬರು ಪ್ರಯಾಗ್‌ರಾಜ್‌ಗೆ ಹೋಗಿರುವುದು ಪತ್ತೆಯಾಗಿತ್ತು. ಸದ್ಯ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಇಬ್ಬರ ಪೈಕಿ ಓರ್ವ ಅಪ್ರಾಪ್ತನಾಗಿದ್ದಾನೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here