ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

0
Spread the love

ಚಾಮರಾಜನಗರ:– ಇಬ್ಬರು ಯುವಕರು ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿನ ಹನೂರು ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಜರುಗಿದೆ. ಚಾಮರಾಜು (25) ಹಾಗೂ ಆಕಾಶ್ (22) ಮೃತರು.

Advertisement

ಚಾಮರಾಜು ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರೆ, ಆಕಾಶ್ ಕೂಡ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸಮಾಡುತ್ತಿದ್ದರು. ರವಿವಾರ ಸಂಬಂಧಿಕರ ಗೃಹಪ್ರವೇಶದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಇಬ್ಬರೂ, ಕಾರ್ಯಕ್ರಮ ಮುಗಿದ ನಂತರ ಆನೆಗುಂದಿ ಗ್ರಾಮದ ದೊಡ್ಡಪ್ಪ ಕೆಂಪರಾಜು ಅವರ ಜಮೀನಿನಲ್ಲಿ ಇರುವ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದರು. ಈಜುವ ವೇಳೆ ನೀರಿನಲ್ಲಿ ಮುಳುಗಿ, ಮೇಲಕ್ಕೆ ಬಾರಲಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದು ಹನೂರು ಪಟ್ಟಣದ ಶವಗಾರಕ್ಕೆ ರವಾನಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here