ಮೈಸೂರು:- ಕಳೆದ ಕೆಲವು ದಿನಗಳ ಹಿಂದೆ ನಡೆದಿದ್ದ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ಇದೀಗ ಜಾಮೀನು ಮಂಜೂರಾಗಿದೆ.
ಮೈಸೂರಿನ ಉದಯಗಿರಿ ಗಲಾಟೆ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಠಾಣೆ, ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ ದಾಂಧಲೆ ಮಾಡಲಾಗಿತ್ತು. ಮೈಸೂರು ಸಿಸಿಬಿ ಪೊಲೀಸರು ತನಿಖೆ ಕೈಗೆತ್ತಿಗೊಂಡ 12 ಗಂಟೆಯಲ್ಲೇ 8 ಜನರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಬಂಧಿತರೆಲ್ಲರೂ ಉದಯಗಿರಿ ಅಕ್ಕಪಕ್ಕದ ಬಡವಾಣೆಗಳ ನಿವಾಸಿಗಳಾಗಿದ್ದರು.
ಆರೋಪಿ ಮೌಲ್ವಿ ಮುಷ್ತಾಕ್, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಮುಸ್ಲಿಂ ಯುವಕರು ಕಲ್ಲು ತೂರಲು ಪ್ರೇರೇಪಣೆ ಮಾಡಿದ್ದ ಆರೋಪ ಹೊತ್ತಿದ್ದ. ಘಟನೆ ಬಳಿಕ ಆರೋಪಿ ನಾಪತ್ತೆಯಾಗಿದ್ದ. 11 ದಿನಗಳ ಬಳಿಕ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದರು.
ಗಲಭೆ ವೇಳೆ ಮೌಲ್ವಿ ಮುಷ್ತಾಕ್ ಪ್ರಚೋದನಾತ್ಮಕ ಭಾಷಣದ ವಿಡಿಯೋ ವೈರಲ್ ಆಗಿತ್ತು. ಇದೀಗ ಮೌಲ್ವಿ ಮುಷ್ತಾಕ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.