ಉಡುಪಿ: ಪ್ರಿಯಕರನಿಗಾಗಿ ಪತಿಯನ್ನೇ ಕೊಲೆ ಮಾಡಿದ ಪತ್ನಿ!

0
Spread the love

ಉಡುಪಿ: ಪ್ರಿಯಕರನ ಜೊತೆ ಸೇರಿ ಹೆಂಡತಿಯೇ ಗಂಡನನ್ನು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದ. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದ.

ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರನೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು.

ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾನ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.


Spread the love

LEAVE A REPLY

Please enter your comment!
Please enter your name here