ಯುಗಾದಿ ಸಂಭ್ರಮ: ಕೆ.ಆ‌ರ್.ಮಾರುಕಟ್ಟೆಯಲ್ಲಿ ಖರೀದಿ ಬರಾಟೆ ಜೋರು – ಎಲ್ಲೆಲ್ಲೂ ಜನ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿಯೂ ಮಾವು ಮತ್ತು ಬೇವಿನ ಸೊಪ್ಪಿನ ರಾಶಿ ಇರಿಸಲಾಗಿದ್ದು, ಜನರು ಸಂಭ್ರಮದಿಂದ ಖರೀದಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬರುತ್ತಿದೆ.

Advertisement

ಕೆ.ಆ‌ರ್.ಮಾರುಕಟ್ಟೆ, ಯಶವಂತಪುರ, ಗಾಂಧಿ ಬಜಾರ್, ಮಲ್ಲೇಶ್ವರ, ಬಸವನಗುಡಿ, ಜಯನಗರ, ವಿಜಯನಗರ, ಮಡಿವಾಳ, ಕೆ.ಆರ್.ಪುರ, ಯಲಹಂಕ, ಕೆಂಗೇರಿ ಸೇರಿದಂತೆ ನಗರದ ವಿವಿಧೆಡೆ ಮಾರುಕಟ್ಟೆಯಲ್ಲಿ ಜನಜಂಗುಳಿ ಇನ್ನೂ ಮುಂದುವರಿದಿದೆ. ಜನರು ಹಬ್ಬಕ್ಕೆ ಬೇಕಾದ ಮಾವು ಮತ್ತು ಬೇವಿನ ಸೊಪ್ಪು, ಹೂವು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ.

ನಗರದ ಬಟ್ಟೆ ಅಂಗಡಿಗಳು, ಆಭರಣ ಮಳಿಗೆಗಳಲ್ಲೂ ಖರೀದಿ ಜೋರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಎರಡು-ಮೂರು ದಿನಗಳಿಂದ ಹೂವಿನ ವ್ಯಾಪಾರ ಗರಿಗೆದರಿದ್ದು, ಮಲ್ಲಿಗೆ, ಗುಲಾಬಿ ಸೇರಿದಂತೆ ಕೆಲ ಹೂವಿನ ದರಗಳು ಕೊಂಚ ಏರಿಕೆಯಾಗಿವೆ. ಅಲ್ಲದೇ ಈ ಬಾರಿ ಕನಕಾಂಬರ ಹೂವಿನ ಬೆಳೆ ಚೆನ್ನಾಗಿ ಬಂದಿದ್ದು, ಬೇಡಿಕೆಗಿಂತ ಪೂರೈಕೆ ಹೆಚ್ಚಾಗಿದೆ.

ನಗರವಾಸಿಗಳಲ್ಲಿ ಹಲವರು ಊರುಗಳಿಗೆ ತೆರಳಿದ್ದಾರೆ. ತಿಂಗಳಾಂತ್ಯಕ್ಕೆ ಹಬ್ಬ ಬಂದಿದ್ದರಿಂದ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಗ್ರಾಹಕರ ಸಂಖ್ಯೆ ಕಡಿಮೆಯಿದೆ. ಇದರಿಂದಾಗಿ ಮಾರುಕಟ್ಟೆಗಳಲ್ಲಿ ವ್ಯಾಪಾರ ಕಡಿಮೆ ಆಗಿದೆ.


Spread the love

LEAVE A REPLY

Please enter your comment!
Please enter your name here