ಹೆಂಡತಿ ಕಿರುಕುಳ ತಾಳಲಾರದೆ ಆತ್ಮಹತ್ಯೆ; ಸೆಲ್ಫಿ ವಿಡಿಯೋ ಮಾಡಿಟ್ಟು ರೈಲಿಗೆ ತಲೆಕೊಟ್ಟ ಗಂಡ

0
Spread the love

ಬೆಂಗಳೂರು ದಕ್ಷಿಣ:- ಹೆಂಡತಿ ಕಿರುಕುಳ ತಾಳಲಾರದೆ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ರೇವಂತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಅಣ್ಣೆದೊಡ್ಡಿ ಗ್ರಾಮದ ನಿವಾಸಿಯಾಗಿರುವ ರೇವಂತ್ ಬಿಡದಿ ಬಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ.

ರೇವಂತ್ ಸಾವಿಗೆ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದು, ಅದರಲ್ಲಿ “ನನ್ನ ಸಾವಿಗೆ ನನ್ನ ಹೆಂಡತಿ ಕಾರಣ. ತುಂಬ ಕಿರುಕುಳ ಕೊಡುತ್ತಿದ್ದಾಳೆ, ಬದುಕಲು ಆಗುತ್ತಿಲ್ಲ” ಎಂದು ಹೇಳಿಕೊಂಡಿದ್ದಾನೆ. ಬಳಿಕ ಬಿಡದಿ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದಾರೆ.

ಈ ಘಟನೆಯ ಕುರಿತು ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


Spread the love

LEAVE A REPLY

Please enter your comment!
Please enter your name here