ಪೌರಕಾರ್ಮಿಕರ ಜತೆ ಸೇರಿ ಕಸ ಗುಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ!

0
Spread the love

ಬೆಂಗಳೂರು: ಪೌರ ಕಾರ್ಮಿಕರೊಂದಿಗೆ ಸೇರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕಸ ಗುಡಿಸಿದ್ದಾರೆ.ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು. ಅಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Advertisement

ಹೆಚ್‌ಎಂಟಿ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸ್ವಚ್ಚ ಭಾರತ ದಿವಸ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಭಾಗವಹಿಸಿದ್ದ ಪೌರ ಕಾರ್ಮಿಕರ ಯೋಗ ಕ್ಷೇಮವನ್ನು ಕೇಂದ್ರ ಸಚಿವರು ವಿಚಾರಿಸಿದರು. ಅಲ್ಲದೆ, ಅವರಿಗೆ ಸ್ವಚ್ಚತಾ ದಿವಸದ ಪ್ರಮಾಣ ಪತ್ರಗಳನ್ನು ವಿತರಿಸಿದರು.


Spread the love

LEAVE A REPLY

Please enter your comment!
Please enter your name here