ಕೆಸರು ಗುಂಡಿಯಲ್ಲಿ ಕಾರು ಸಿಲುಕಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪರದಾಟ!

0
Spread the love

ರಾಂಚಿ:- ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆಯ ಕೆಸರು ಗುಂಡಿಯಲ್ಲಿ ಸಿಲುಕಿ ಪರದಾಡಿದ ಘಟನೆ ಜಾರ್ಖಂಡ್‌ನ ಬಹರಗೋರಾ ನಗರದಲ್ಲಿ ಜರುಗಿದೆ.

Advertisement

ಸಚಿವರು ಪ್ರಯಾಣಿಸುತ್ತಿದ್ದ ಕಾರು ಜಲಾವೃತವಾದ ರಸ್ತೆಯ ದೊಡ್ಡ ಗುಂಡಿಯಲ್ಲಿ ಓರೆಯಾಗಿ ನಿಂತಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಧಾವಿಸಿ ಕಾರನ್ನು ತಳ್ಳಲು ಯತ್ನಿಸಿದ್ದಾರೆ. ಆದರೆ ಕಾರು ಗುಂಡಿಯಿಂದ ಮೇಲೆ ಬರಲಿಲ್ಲ. ಬಳಿಕ ಶಿವರಾಜ್ ಚೌಹಾಣ್ ವಾಹನದಿಂದ ಹೊರಬಂದಿದ್ದಾರೆ.

ಇನ್ನೂ ಶಿವರಾಜ್ ಸಿಂಗ್ ಚೌಹಾಣ್ ಜಾರ್ಖಂಡ್‌ನ ಬಿಜೆಪಿಯ ಚುನಾವಣಾ ಉಸ್ತುವಾರಿ ಮತ್ತು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಚಾರಕ್ಕಾಗಿ ಅಲ್ಲಿಗೆ ಬಂದಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here