HomeKarnataka Newsಹಾಸನದಲ್ಲಿ ನಿಲ್ಲದ ಹೃದಯಾಘಾತ ಸರಣಿ ಸಾವು; ಮತ್ತಿಬ್ಬರು ಸಾವು- ಜನರಲ್ಲಿ ಹೆಚ್ಚಿದ ಆತಂಕ!

ಹಾಸನದಲ್ಲಿ ನಿಲ್ಲದ ಹೃದಯಾಘಾತ ಸರಣಿ ಸಾವು; ಮತ್ತಿಬ್ಬರು ಸಾವು- ಜನರಲ್ಲಿ ಹೆಚ್ಚಿದ ಆತಂಕ!

For Dai;y Updates Join Our whatsapp Group

Spread the love

ಹಾಸನ:- ಹೃದಯಾಘಾತದಿಂದ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಜರುಗಿದ್ದು, ಸರಣಿ ಸಾವು ಕಂಡು ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸೇರಿ 70 ವರ್ಷದ ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೃದಯಾಘಾತಕ್ಕೆ 70ರ ವೃದ್ಧ ಬಲಿ:

ಸಕಲೇಶಪುರ ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಹೃದಯಾಘಾತದಿಂದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ. ಸಿ. ಬಿ ವಿರುಪಾಕ್ಷ ಮೃತ ವ್ಯಕ್ತಿ. ಕಳೆದ ರಾತ್ರಿ 11:30 ರಲ್ಲಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬದವರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ದುರಾದೃಷ್ಟವಶಾತ್ ಮಾರ್ಗ ಮಧ್ಯೆ ವಿರೂಪಾಕ್ಷ ಸಾವನ್ನಪ್ಪಿದ್ದಾರೆ.

ಹೃದಯಾಘಾತಕ್ಕೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ:

ಹೃದಯಾಘಾತದಿಂದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಾವನ್ನಪ್ಪಿರುವ ಘಟನೆ ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದಲ್ಲಿ ಜರುಗಿದೆ. ಸಂತೋಷ್ (40) ವರ್ಷ ಮೃತ ಯುವಕ. ಮಲಗಿದ್ದಾಗಲೇ ಬೆಳಗ್ಗಿನ ಜಾವ 5 ಗಂಟೆಯಲ್ಲಿ ಹೃದಯಾಘಾತ ಸಂಭವಿಸಿದೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದ ಸಂತೋಷ್ ಸಮಾಜ ಸೇವಕರಾಗಿದ್ದರು. ಇವರ ಅಗಲಿಕೆಯಿಂದ ಗ್ರಾಮದಲ್ಲಿ ಮೌನ ಆವರಿಸಿದೆ. ಇದರಿಂದ 42 ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಮತ ಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!