ಜೈಪುರ: ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಇದೀಗ ವೈಭವ್ ಮನೆಮಾತಾಗಿದ್ದಾರೆ. ಅಲ್ಲದೆ ಚೊಚ್ಚಲ ಸೆಂಚುರಿಯೊಂದಿಗೆ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿರುವ ಯುವ ದಾಂಡಿಗ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ.
ಇದೀಗ ವೈಭವ್ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್ ಬಹುಮಾನ ನೀಡಿ ಘೋಷಿಸಿದೆ. ಶತಕ ಬಾರಿಸಿದ ವೈಭವ್ ಸೂರ್ಯವಂಶಿಗೆ ಸಿಎಂ ನಿತೀಶ್ ಕುಮಾರ್ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದರು.
ವೈಭವ್ ಸೂರ್ಯವಂಶಿಗೆ ಅಭಿನಂದನೆ ತಿಳಿಸಿದರು. ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ.
ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಫೋನ್ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ಶುಭಕೋರಿದರು.