ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೊಳಿಸುವಂತೆ ಆದೇಶಿಸಿರುವ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಅಭಿನಂದಿಸಿದ್ದಾರೆ.
ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಧಾರವಾಡ-ಬೆಂಗಳೂರು ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲನ್ನು ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಷ್ಟೇ ನಿಲುಗಡೆ ಮಾಡಲಾಗುತ್ತಿತ್ತು. ಹಾವೇರಿ ಮತ್ತು ಗದಗ ಜಿಲ್ಲೆಯ ಜನರಿಗೂ ಸಹ ಈ ರೈಲಿನ ಉಪಯೋಗವಾಗಬೇಕು ಎನ್ನುವ ನಿಟ್ಟಿನಲ್ಲಿ ಹಾವೇರಿ ನಿಲ್ದಾಣದಲ್ಲಿ ಸಹ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಇತ್ತೀಚಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಶಾಸಕರಾದ ಶ್ರೀನಿವಾಸ ಮಾನೆ ಅವರ ನೇತೃತ್ವದಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸ್ಪಂದಿಸಿದ್ದಕ್ಕೆ ಗಡ್ಡದೇವರಮಠ ಸಂತಸ ವ್ಯಕ್ತಪಡಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಯತ್ನಿಸಿ ವಂದೇ ಭಾರತ್ ರೈಲನ್ನು ಹಾವೇರಿ ನಿಲ್ದಾಣದಲ್ಲಿ ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲು ಕನಿಷ್ಠ 5 ನಿಮಿಷಗಳಾದರೂ ನಿಲುಗಡೆ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದನ್ನು ನೆನಪಿಸಿಕೊಂಡಿರುವ ಆನಂದ ಗಡ್ಡದೇವರಮಠ, ತಮ್ಮ ಮನವಿಗೆ ಸ್ಪಂದಿಸಿದ್ದಕ್ಕೆ ಸಂಸದ ಬೊಮ್ಮಾಯಿ ಅವರಿಗೂ ಸಹ ಅಭಿನಂದನೆ ಸಲ್ಲಿಸಿದ್ದಾರೆ.