ಬೆಂಗಳೂರು:- ಒಂದೆಡೆ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದರೆ, ಮತ್ತೊಂದೆಡೆ ಡಿಜಿಪಿ ರಾಮಚಂದ್ರರಾವ್ 10 ದಿನಗಳ ಕಡ್ಡಾಯ ರಜೆಯ ಮೇಲೆ ತೆರಳಿದ್ದಾರೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕಚೇರಿಯಲ್ಲೇ ಮಹಿಳೆಯರೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಡಿಯೋ ಸಹ ಹರಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಮಚಂದ್ರರಾವ್, “ನನಗೆ ಇದು ಗೊತ್ತಿಲ್ಲ, ಯಾರೋ ಎಐ ಮೂಲಕ ಷಡ್ಯಂತ್ರ ಮಾಡಿದ್ದಾರೆ. ಕಾನೂನು ಹೋರಾಟ ಮಾಡುತ್ತೇನೆ” ಎಂದಿದ್ದಾರೆ.
ಆದರೆ ಮತ್ತೊಂದು ಸ್ಥಳದಲ್ಲಿ ಈ ವಿಡಿಯೋ 8 ವರ್ಷ ಹಳೆಯದಾಗಿದೆ ಎಂಬ ಮಾಹಿತಿ ನೀಡಿರುವುದರಿಂದ ಡಿಜಿಪಿ ಹೇಳಿಕೆ ಅನುಮಾನಾಸ್ಪದವಾಗಿದೆ. ಇನ್ನೂ ವಿಡಿಯೋ ಹೊರಬೀಳುತ್ತಿದ್ದಂತೆ ಗೃಹ ಸಚಿವ ಪರಮೇಶ್ವರ್ ಭೇಟಿಗೆ ಪ್ರಯತ್ನಿಸಿದರೂ ಅವರು ಮನೆಗೆ ಇದ್ದರೂ ಅವಕಾಶ ನೀಡಿರಲಿಲ್ಲ. ಹೀಗಾಗಿ ರಾಮಚಂದ್ರರಾವ್ 10 ದಿನ ಕಡ್ಡಾಯ ರಜೆಯ ಮೇಲೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಶಿಸ್ತು ಕ್ರಮದ ಸೂಚನೆ ನೀಡಿ, ಕಾನೂನಿಗಿಂತ ಯಾರೂ ದೊಡ್ಡವರು ಅಲ್ಲ ಎಂದು ಹೇಳಿದ್ದಾರೆ. ಈ ನಡುವೆ ಡಿಸಿಎಂ ಡಿಕೆಶಿ ಅವರು “ನನಗೆ ಗೊತ್ತಿಲ್ಲ, ಪರಮೇಶ್ವರ್ ಅವರನ್ನು ಕೇಳಿ” ಎಂದು ತಿಳಿಸಿದ್ದಾರೆ.



