ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ವೀಕ್ಷಕರು ಬಂದಿದ್ದಾರೆ: ಬಿ.ಎಸ್. ಯಡಿಯೂರಪ್ಪ

0
Spread the love

ಬೆಂಗಳೂರು : ವಿಪಕ್ಷ ನಾಯಕರ ಆಯ್ಕೆ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾವ ಸಮುದಾಯಕ್ಕೆ ವಿಪಕ್ಷ ನಾಯಕನ ಸ್ಥಾನ ಕೊಡಬೇಕು ಅಂತ ಹೈಕಮಾಂಡ್ ಮನಸಲ್ಲಿದೆ. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

Advertisement

ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ವೀಕ್ಷಕರು ಬಂದಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು, ಯಾರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂಬ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇವತ್ತೇ ಘೋಷಣೆ ಮಾಡಬಹುದು ಅಥವಾ ದೆಹಲಿಗೆ ಹೋಗಿ ಘೋಷಣೆ ಮಾಡಬಹುದು ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here