ವಿಜಯನಗರ: ನೀರಿನ ರಭಸಕ್ಕೆ ಕೊಚ್ಚಿ ಹೋಗ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಮಾರ್ಗವಾಗಿ ಹರಿದು ಹೋಗುವ ತುಂಗಭದ್ರಾ ಜಲಾಶಯದ LLC ಕಾಲುವೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಯುವಕ ದೇವಸ್ಥಾನಕ್ಕೆ ಬಂದಿದ್ದನು. ಈ ವೇಳೆ ಸ್ನಾನ ಮಾಡಲೆಂದು ನೀರಿಗೆ ಇಳಿದಿದ್ದನು.
Advertisement
ನೀರಿನ ರಭಸಕ್ಕೆ ಒಂದಿಷ್ಟು ದೂರ ಹಾದು ಹೋದ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಬರಿಗೊಂಡ ಯುವಕನಿಗೆ ಸ್ಥಳೀಯರು ಧೈರ್ಯ ತುಂಬಿದ್ದಾರೆ. ತಮಿಳುನಾಡಿನಿಂದ ಕಮಲಾಪುರದ ದೇವಸ್ಥಾನಕ್ಕೆ ಯುವಕ ಮತ್ತು ಕುಟುಂಬಸ್ಥರು ಬಂದಿದ್ದರು. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.