ವಿಜಯಪುರ:- ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಯಂಕರ ದರೋಡೆ ನಡೆದಿದೆ.
ಮಂಕಿ ಕ್ಯಾಪ್ ಮತ್ತು ಹೆಲ್ಮೆಟ್ ಧರಿಸಿದ್ದ ಇಬ್ಬರು ಮುಸುಕುಧಾರಿಗಳು ಪಿಸ್ತೂಲ್ ತೋರಿಸಿ, ಮಹಾರುದ್ರ ಕಂಚಗಾರರಿಗೆ ಸೇರಿದ ಚಿನ್ನಾಭರಣ ಮತ್ತು ಮೊಬೈಲ್ ಅಂಗಡಿಯನ್ನು ಲೂಟಿ ಮಾಡಿ ಬೈಕಿನಲ್ಲಿ ಪರಾರಿಯಾಗಿದ್ದಾರೆ. ದರೋಡೆ ಸಮಯದಲ್ಲಿ ವಿಡಿಯೋ ಮಾಡಲು ಮುಂದಾದ ಆತ್ಮಲಿಂಗ ಹೂಗಾರ ಎಂಬ ಯುವಕನ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.
ಈ ದರೋಡೆ ದೃಶ್ಯಾವಳಿ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳರು ಸುಮಾರು 200 ಗ್ರಾಂ ಚಿನ್ನ ಮತ್ತು 1 ಕೆಜಿ ಬೆಳ್ಳಿಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಎಸ್.ಪಿ. ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ದರೋಡೆ ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.



