ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ; ಪೊಲೀಸರಿಂದ ಲಘು ಲಾಠಿ ಪ್ರಹಾರ…!

0
Spread the love

ಮಾತಿನ ಚಕಮಕಿ….. ವಾಗ್ವಾದ…. ತಡೆಯಲು ಮುಂದಾದ ಪೊಲೀಸರು…..

Advertisement

ವಿಜಯಸಾಕ್ಷಿ ಸುದ್ದಿ, ಗದಗ

ವೋಟ್ ಹಾಕಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ಹೋದ ಘಟನೆ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಜರುಗಿದೆ.

ಬಿಂಕದಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ 134ರ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಮತ ಹಾಕಲು ಬರುವವರೆಗೆ ವೋಟ್ ಹಾಕಲು ಹೇಳಿದಾಗ ಮಾತಿನ ಚಕಮಕಿ ನಡೆದಿದೆ.

ಮಾತಿನ ಚಕಮಕಿ, ವಾಗ್ವಾದ ತಡೆಯಲು ಹೋದ ಪೊಲೀಸರು ಲಾಠಿ ಏಟು ಕೊಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಒಬ್ಬರ ಶರ್ಟ್ ಹಿಡಿದಿದ್ದು, ಪೊಲೀಸರ ಪಿತ್ತ ನೆತ್ತಗೇರಿಸಿದೆ. ಕೂಡಿದ್ದ ಎರಡೂ ಕಡೆಯ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಸುದ್ದಿ ತಿಳಿದು ಎಸ್ಪಿ ಬಿ ಎಸ್ ನೇಮಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಘಟನೆಯಿಂದ ಬಿಂಕದಕಟ್ಟಿಯ ಸರಕಾರಿ ಶಾಲೆಯ ಬಳಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳದಲ್ಲಿ ಈಗ ಪೊಲೀಸರು ಮೂಕ್ಕಾಂ ಹೂಡಿದ್ದಾರೆ.


Spread the love

LEAVE A REPLY

Please enter your comment!
Please enter your name here