ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರ ದುರ್ಮರಣ

0
Spread the love

ವಿಜಯಸಾಕ್ಷಿ ಸುದ್ದಿ, ಬೀದರ್

Advertisement

ಬಟ್ಟೆ ಒಗೆಯಲೆಂದು ಕೆರೆಯ ಬಳಿ ತೆರಳಿದ್ದ ಸಂದರ್ಭದಲ್ಲಿ ಇಬ್ಬರು ಮಕ್ಕಳು ಈಜಲು ಹೋಗಿ, ಮಕ್ಕಳೂ ಸೇರಿದಂತೆ ರಕ್ಷಣೆಗೆ ಧಾವಿಸಿದ ಉಳಿದಿಬ್ಬರೂ ಸೇರಿ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದ ಕರೆಯಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಆನಂದ, ಪ್ರಜ್ವಲ್, ಸುನೀತಾ, ನಾಗೇಶ್ ಎಂದು ತಿಳಿದುಬಂದಿದೆ. ಎಲ್ಲರೂ ಸೇರಿ ದಸರಾ ಹಬ್ಬದ ತಯಾರಿಗಾಗಿ ಕೆರೆಯ ಬಳಿ ಹೆಚ್ಚಿನ ಬಟ್ಟೆ ಒಗೆಯಲೆಂದು ತೆರಳಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಬ್ಬರು ಕೆರೆಯಲ್ಲಿ ಈಜಾಟವಾಡುತ್ತಿದ್ದರು ಎನ್ನಲಾಗಿದ್ದು, ಆಯತಪ್ಪಿ ನೀರಿನಲ್ಲಿ ಬಿದ್ದಾಗ ಅವರ ರಕ್ಷಣೆಗೆ ಮುಂದಾದ ಪಾಲಕರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here