ವಿಜಯಸಾಕ್ಷಿ ಸುದ್ದಿ, ಮುಂಡರಗಿ:

ಗದಗ-ಕೊಪ್ಪಳ ರಾಷ್ಟ್ರೀಯ ಹೆದ್ದಾರಿ ಹಳ್ಳಿಕೇರಿ ಗ್ರಾಮದ ಬಳಿ ಹಾಲಿನ ಗಾಡಿಯೊಂದು ಸೇತುವೆಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಶಿದ್ಧಲಿಂಗಯ್ಯ ಪೂಜಾರ ಹಾಗೂ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಚಾಲಕ ಸಾಧಿಕ್ ಸೈಯ್ಯದ್ಸಾಬ ಮುಚ್ಚಾಲೆ( 27) ಮೃತ ದುರ್ದೈವಿಗಳಾಗಿದ್ದಾರೆ.

ಜೆಕೆ ಹಾಲಿನ ಪ್ಯಾಕೇಟ್ ಸರಬರಾಜು ಮಾಡುವ ವಾಹನ ಹಳ್ಳಿಕೇರಿ ಗ್ರಾಮದ ಬಳಿ ಫೂಲ್ ಕಟ್ಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ವಾಹನದಲ್ಲಿದ್ದ ಹಾಲಿನ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



