HomeCrime Newsಅಯ್ಯೋ ದುರ್ವಿಧಿಯೇ, ಮೊಹರಂ ಹಬ್ಬದಲ್ಲಿ ಇಬ್ಬರ ದರ್ಮರಣ; ಹೆಜ್ಜೆ ಹಾಕುತ್ತಲೇ ಕುಸಿದು ಗ್ರಾಮ ಪಂಚಾಯತಿ...

ಅಯ್ಯೋ ದುರ್ವಿಧಿಯೇ, ಮೊಹರಂ ಹಬ್ಬದಲ್ಲಿ ಇಬ್ಬರ ದರ್ಮರಣ; ಹೆಜ್ಜೆ ಹಾಕುತ್ತಲೇ ಕುಸಿದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಾವು, ಮತ್ತೊಬ್ಬ ಅಲಿದೇವರು ಹೊತ್ತಾಗಲೇ ಸಾವು…..

For Dai;y Updates Join Our whatsapp Group

Spread the love

ಗ್ರಾಮದಲ್ಲಿ ಸೂತಕದ ಛಾಯೇ….

ವಿಜಯಸಾಕ್ಷಿ ಸುದ್ದಿ, ಗದಗ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಮೊಹರಂ ಹಬ್ಬದಲ್ಲಿ ಪ್ರತ್ಯೇಕ ಗ್ರಾಮಗಳಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ದಾರುಣ ಘಟನೆ ಇಂದು ಜರುಗಿದೆ.

ಇದನ್ನೂ ಓದಿ ಫಾರ್ಮ್ ನಂ.3 ವಿತರಣೆಯಲ್ಲಿ ಕರ್ತವ್ಯಲೋಪ; ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ

ಇವತ್ತು ಮೊಹರಂ ಕೊನೆಯ ದಿನವಾಗಿದ್ದರಿಂದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಂಜಾಗಳ (ಅಲಿದೇವರು) ಮೆರವಣಿಗೆಯಲ್ಲಿ ಹೆಜ್ಜೆ ಮಜಲಿನಲ್ಲಿ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ನೋಡುನೋಡುತ್ತಿದ್ದಂತೆಯೇ ಕುಸಿದುಬಿದ್ದ. ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನಿಗಿದ್ದಾನೆ.

ಲಕ್ಕುಂಡಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಇಮಾಮ್ ಸಾಬ ನದಾಫ್ (55) ಮೃತಪಟ್ಟ ದುರ್ಧೈವಿಯಾಗಿದ್ದಾನೆ.

ಇನ್ನೊಂದು ಪ್ರಕರಣದಲ್ಲಿ ಅಲಿದೇವರು (ಪಂಜಾ) ಹೊತ್ತಿದ್ದ ವ್ಯಕ್ತಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗದಗ ತಾಲೂಕಿನ ಹರ್ಲಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶರೀಫ್ ಮೂಲಿಮನಿ (40) ಮೃತಪಟ್ಟ ದುರ್ಧೈವಿ. ಮೊಹರಂ ಹಬ್ಬದ ಕೊನೆಯ ದಿನವೇ ಈ ಎರಡೂ ಘಟನೆ ನಡೆದಿದ್ದು, ಎರಡೂ ಗ್ರಾಮದಲ್ಲಿ ಸೂತಕರ ವಾತಾವರಣ ನಿರ್ಮಾಣವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!