ವಿಜಯಸಾಕ್ಷಿ ಸುದ್ದಿ, ಗದಗ
ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು_ ಜಿಲ್ಲೆಯಲ್ಲಿ ಬುಧವಾರ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 22 ಅಭ್ಯರ್ಥಿಗಳಿಂದ 28 ನಾಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 73 ನಾಮಪತ್ರಗಳು ಸಲ್ಲಿಕೆಯಾಗಿವೆ.
65-ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ 12 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಅಶೋಕ ಹೇಮಪ್ಪ ಲಮಾಣಿ-1, ಪಕ್ಷೇತರ ಅಭ್ಯರ್ಥಿಯಾಗಿ ಸುನೀಲಕುಮಾರ ಪಾಂಡಪ್ಪ ಬಹಮನಪದ-1, ಆಮ್ ಆದ್ಮಿ ಪಾರ್ಟಿಯಿಂದ ಮಲ್ಲಿಕಾರ್ಜುನ ಯಲ್ಲಪ್ಪ ದೊಡ್ಡಮನಿ-2, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಕ್ಷದಿಂದ ಸುಜಾತಾ ನಿಂಗಪ್ಪ ದೊಡಮನಿ-3,

ಜನತಾ ದಳ(ಸೆಕ್ಯೂಲರ) ದಿಂದ ಹನುಮಂತಪ್ಪ ನಾಯಕ-1, ಪಕ್ಷೇತರ ಅಭ್ಯರ್ಥಿಗಳಾಗಿ ಸಂತೋಷ ಗೌರವ್ವ ಹಿರೇಮನಿ-1, ಹನುಮಂತಪ್ಪ ಪೀರಪ್ಪ ಕೋರವರ-1, ಗುರುನಾಥ ಕಲ್ಲಪ್ಪ ದಾನಪ್ಪನವರ ಭಾರತೀಯ ಜನತಾ ಪಾರ್ಟಿಯಿಂದ-1, ಗುರುನಾಥ ಕಲ್ಲಪ್ಪ ದಾನಪ್ಪನವರ ಪಕ್ಷೇತರರಾಗಿ-1 ನಾಮಪತ್ರ ಸಲ್ಲಿಸಿರುತ್ತಾರೆ.

66-ಗದಗ ವಿಧಾನಸಭಾ ಮತಕ್ಷೇತ್ರದಿಂದ 7 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂಡಿಯನ್ ಮೂವಮೆಂಟ್ ಪಾರ್ಟಿಯಿಂದ ಪೂಜಾ ಮಲ್ಲಪ್ಪ ಬೇವೂರ-1, ಆಮ್ ಆದ್ಮಿ ಪಾರ್ಟಿಯಿಂದ ಪೀರಸಾಬ ಶೇಖ-2, ಜನತಾ ದಳ(ಸೆಕ್ಯೂಲರ)ಪಾರ್ಟಿಯಿಂದ ಗೋವಿಂದಗೌಡ ವೆಂಕನಗೌಡ-1, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಸಚಿನಕುಮಾರ ಕರ್ಜೆಣ್ಣವರ-1, ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಶಂಕರಗೌಡ ಪರ್ವತಗೌಡ್ರ-1, ಪಕ್ಷೇತರರಾಗಿ ಬಸವರಾಜ ಷಣ್ಮುಖಪ್ಪ ಮಾಳೋದ-1 ನಾಮಪತ್ರ ಸಲ್ಲಿಸಿರುತ್ತಾರೆ.

67-ರೋಣ ವಿಧಾನಸಭಾ ಮತಕ್ಷೇತ್ರದಿಂದ 3 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಭಾರತೀಯ ಜನತಾ ಪಾರ್ಟಿಯಿಂದ ಕಳಕಪ್ಪ ಬಂಡಿ-1, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಿಂದ ಗುರುಪಾದಗೌಡ ಸಂಗನಗೌಡ ಪಾಟೀಲ-2 ನಾಮಪತ್ರ ಸಲ್ಲಿಸಿರುತ್ತಾರೆ.


68-ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ 6 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ವೀರೇಶ ಸೊಬರದಮಠ-1, ಜನತಾದಳ (ಸೆಕ್ಯೂಲರ)ದಿಂದ ರುದ್ರಗೌಡ ನಿಂಗನಗೌಡ ಪಾಟೀಲ-1, ಪಕ್ಷೇತರ ಅಭ್ಯರ್ಥಿಯಾಗಿ ರಾಮಪ್ಪ ಹುಜರತ್ತಿ-1, ಪಕ್ಷೇತರ ಅಭ್ಯರ್ಥಿಯಾಗಿ ಶಿವಾನಂದ ಶಿದ್ದಪ್ಪ ಮಾಯಣ್ಣವರ-1, ಭಾರತೀಯ ಜನತಾ ಪಾರ್ಟಿಯಿಂದ ಚಂದ್ರಕಾಂತಗೌಡ ಚನ್ನಪ್ಪಗೌಡ ಪಾಟೀಲ-2 ನಾಮಪತ್ರ ಸಲ್ಲಿಕೆಯಾಗಿರುತ್ತವೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
