ವಿಧಾನಸಭೆ ಚುನಾವಣೆ; ಗದಗ ಜಿಲ್ಲೆಯಲ್ಲಿಂದು 18 ನಾಮಪತ್ರ ಸಲ್ಲಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ವಿಧಾನ lಸಭಾ ಕ್ಷೇತ್ರಗಳಲ್ಲಿ ಸೋಮವಾರ 14 ಅಭ್ಯರ್ಥಿಗಳಿಂದ 18 ನಾಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ.

Advertisement

65-ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ 6 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂಡಿಯನ್ ಮೂಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಮುತ್ತು ಎಸ್-1, ಅನಿಲ ನಾಗಪ್ಪ ಮುಳಗುಂದ ಭಾರತೀಯ ಜನತಾ ಪಾರ್ಟಿ-1, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಕ್ಷದಿಂದ ಸುಜಾತಾ ನಿಂಗಪ್ಪ ದೊಡ್ಡಮನಿ-1, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಂಜುನಾಥ ಅಸಂಗೆಪ್ಪ ಆಸಂಗಿ-1, ಪಕ್ಷೇತರ ಅಭ್ಯರ್ಥಿಯಾಗಿ ಅನಿಲ ನಾಗಪ್ಪ ಮುಳಗುಂದ-1, ಪಕ್ಷೇತರ ಅಭ್ಯರ್ಥಿಯಾಗಿ ರಾಮಕೃಷ್ಣ್ ಸಿದ್ದಲಿಂಗಪ್ಪ ದೊಡ್ಡಮನಿ-1,

66-ಗದಗ ವಿಧಾನಸಭಾ ಮತಕ್ಷೇತ್ರದಿಂದ 7 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಆನಂದ ಬಸವರಾಜ ಹಂಡಿ-1, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಕ್ಷದಿಂದ ಹನುಮಂತಗೌಡ ಕೃಷ್ಣಗೌಡ ಪಾಟೀಲ-4, ಆಮ್ ಆದ್ಮಿ ಪಾರ್ಟಿಯಿಂದ ಪೀರಸಾಬ ಅಬ್ದುಲಸಾಬ ಶೇಖ-1, ಭಾರತೀಯ ಜನತಾ ಪಾರ್ಟಿಯಿಂದ ಅನಿಲ ಪಿ ಮೆಣಸಿನಕಾಯಿ-1,

67-ರೋಣ ವಿಧಾನಸಭಾ ಮತಕ್ಷೇತ್ರದಿಂದ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪಕ್ಷೇತರ ಅಭ್ಯರ್ಥಿಗಳಾಗಿ ಶಿವಾನಂದ ಶಂಕ್ರಪ್ಪ ರಾಠೋಡ-1, ಅಶೋಕ ವಿರುಪಾಕ್ಷಪ್ಪ ಬೇವಿನಕಟ್ಟಿ-1

68-ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ 3 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವೀರನಗೌಡ ಶಿವನಗೌಡ ಮೂಗನೂರ-1, ಆಮ್ ಆದ್ಮಿ ಪಾರ್ಟಿಯಿಂದ ರಾಮಪ್ಪ ದ್ಯಾಮಪ್ಪ ಹೂವಣ್ಣವರ-1, ಪಕ್ಷೇತರ ಅಭ್ಯರ್ಥಿಯಾಗಿ ಮುತ್ತು ಎಸ್-1 ನಾಮಪತ್ರ ಸಲ್ಲಿಕೆಯಾಗಿರುತ್ತವೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here