HomeBelgaumಉತ್ತರ ಕರ್ನಾಟಕದ ಅಭಿವೃದ್ಧಿಯ ಕನಸುಗಾರ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಉತ್ತರ ಕರ್ನಾಟಕದ ಅಭಿವೃದ್ಧಿಯ ಕನಸುಗಾರ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸದಾ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ, ಪ್ರತ್ಯೇಕತೆಯ ಧ್ವನಿ ಎತ್ತಿ ಮುಖ್ಯಮಂತ್ರಿ ಗಾದೆಯ ಕನಸು ಕಾಣುತ್ತಿದ್ದ ಹಿರಿಯ ರಾಜಕಾರಣಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ, ಆಹಾರ ಸಚಿವ ಉಮೇಶ್ ಕತ್ತಿ ಹೃದಯ ಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ರಾಜೀನಾಮೆಗೂ ಸಿದ್ಧ; ಉಮೇಶ ಕತ್ತಿ

ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಗಳವಾರ ರಾತ್ರಿ 10 ಗಂಟೆಗೆ ಹೃದಯಾಘಾತದಿಂದ ಅಸ್ವಸ್ಥಗೊಂಡಿದ್ದ ಉಮೇಶ್ ಕತ್ತಿ ಅವರನ್ನು ತಕ್ಷಣ ಎಮ್ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ‌ಈ ಕುರಿತು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ  ನನಗೂ ಸಿಎಂ ಆಗೋ ಆಸೆ ಇದೆ! ಉಮೇಶ್ ಕತ್ತಿ ಹೊಸ ವರಸೆ

ಆಗಸ್ಟ್ 26 ರಂದು ಗದಗ ಜಿಲ್ಲೆಗೆ ಭೇಟಿ ನೀಡಿದ್ದ ಉಮೇಶ್ ಕತ್ತಿ, ಕೇವಲ ಉತ್ತರ ಕರ್ನಾಟಕಕ್ಕೆ ಮಾತ್ರವಲ್ಲ ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗ್ತೀನಿ ಎಂದಿದ್ದರು.

ಸಚಿವ ಉಮೇಶ್ ಕತ್ತಿ ಅವರ ನಿಧನದಿಂದ ಬೆಳಗಾವಿ ಜಿಲ್ಲೆ ಸೇರಿದಂತೆ ಅವರ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ರಾಜಕಾರಣಿ ಆಗಿದ್ದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ ತರಿಸಿದೆ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!