ವಿಜಯಸಾಕ್ಷಿ ಸುದ್ದಿ, ಗದಗ
ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಹಂದಿಗೋಳ ಗ್ರಾಮದಲ್ಲಿ ಬಿಜೆಪಿ ಸೇರಿದ್ದ ನೂರಾರು ಕಾರ್ಯಕರ್ತರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ನ ಯುವ ನಾಯಕ ಸಂತೋಷ ಯಾವಗಲ್ ನೇತೃತ್ವದಲ್ಲಿ ಮಂಗಳವಾರ ಸಂಜೆ ಚಿಕ್ಕಹಂದಿಗೋಳ ಗ್ರಾಮದ ನಿಂಗಪ್ಪ ಹೆಬಸೂರು, ರವಿ ಕಲ್ಲಾಪೂರ, ಕನಕಪ್ಪ ಪೂಜಾರ ಸೇರಿದಂತೆ ಅನೇಕ ಯುವಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀನಿವಾಸ ದ್ಯಾವನೂರು, ದಾದಾಪೀರ ಅಣ್ಣಿಗೇರಿ ಹಾಗೂ ರವಿ ಮೆಟಗುಡ್ಡ ಸೇರಿದಂತೆ ಗ್ರಾಮದ ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.



