ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲಿಯೇ ಸಾವು, ಇನ್ನಿಬ್ಬರು ಗಂಭೀರ

0
Spread the love

ಯಲ್ಲಮ್ಮನಗುಡ್ಡಕ್ಕೆ ಹೊರಟಾಗ ನಡೆದ ಘಟನೆ

Advertisement

ವಿಜಯಸಾಕ್ಷಿ ಸುದ್ದಿ, ನರಗುಂದ

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೀಬ್ಬರು ಗಾಯಗೊಂಡ ಘಟನೆ ಜರುಗಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮಾದಾಪೂರು ಗ್ರಾಮದ ಮರಿಯಪ್ಪ (30) ಮೃತಪಟ್ಟ ದುರ್ಧೈವಿ.

ತಾಲೂಕಿನ ಭೈರನಹಟ್ಟಿ ಗ್ರಾಮದ ರವಿ ಹಾಗೂ ಶರಣಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನರಗುಂದದಿಂದ ಭೈರನಹಟ್ಟಿ ಕಡೆಗೆ ರವಿ ಹಾಗೂ ಶರಣಪ್ಪ ಹೊರಟಿದ್ದರು.

ಮೃತ ಮರಿಯಪ್ಪ ತನ್ನ ಗೆಳೆಯರಾದ ಅರ್ಜುನ ಹಾಗೂ ಕೃಷ್ಣ ಜೊತೆಗೆ ಯಲ್ಲಮ್ಮನಗುಡ್ಡಕ್ಕೆ ಹೊರಟಿದ್ದರು ಎಂದು ಮೂಲಗಳು ತಿಳಿಸಿವೆ.

ಅರ್ಜುನ ಹಾಗೂ ಕೃಷ್ಣ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here