ಈಜುಕೊಳಕ್ಕೆ ಹೋಗಿ ವಾಪಸು ಬರುವಾಗ ನಡೆದ ಘಟನೆ…….
ವಿಜಯಸಾಕ್ಷಿ ಸುದ್ದಿ, ಗದಗ
ನಿಯಂತ್ರಣ ತಪ್ಪಿದ ಬೈಕ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಬಾಲಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಜರುಗಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದ ಬಸ್ ಡಿಪೋ ಬಳಿ ಈ ದುರ್ಘಟನೆ ಜರುಗಿದೆ.
ಅನೂಪ ಇಟಗಿ (15) ಶ್ರೀಶಾಂತ ಗಡಗಿ (15 ) ಮೃತಪಟ್ಟ ದುರ್ಧೈವಿಗಳು ಎಂದು ಗುರುತಿಸಲಾಗಿದೆ.
ಅಬ್ಬಿಗೇರಿ ಗ್ರಾಮದ ಬಳಿ ಇರುವ ಕಲಾಕಾಶಿ ಈಜು ಕೊಳಕ್ಕೆ ಹೋಗಿ ವಾಪಸು ಬರುವಾಗ ಬೈಕ್ ನಿಯಂತ್ರಣ ಕಳೆದುಕೊಂಡು ಈ ಘಟನೆ ಜರುಗಿದೆ. ಮತ್ತೊಬ್ಬ ಬಾಲಕ ಮೌನೇಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಇಬ್ಬರೂ ಬಾಲಕರು ರೋಣ ಪಟ್ಟಣದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ರೋಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.



