ಬೈಕ್ ಗೆ ಸರಕಾರಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

0
Spread the love

ಚಾಲಕನ ವಿರುದ್ಧ ಸಾರ್ವಜನಿಕರ ಆಕ್ರೋಶ…..

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಜರುಗಿದೆ.

ಮೃತ ಸವಾರ ಸಮೀಪದ ಬ್ಯಾಲವಾಡಗಿ ನಿವಾಸಿ ಚಿಕನ್ ವ್ಯಾಪಾರಿ ಮಂಜುನಾಥ್ ಬಂಡಿ (45) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿ ಬಳಿ ಈ ದುರ್ಘಟನೆ ಜರುಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ದೇಹ ನಜ್ಜು ಗುಜ್ಜಾಗಿದೆ.

ಘಟನೆಯ ನಂತರ ಸ್ಥಳದಲ್ಲಿ ಸೇರಿದ ಸಾರ್ವಜನಿಕರು
ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದು ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಿವೈಡರ್ ಇದ್ದಿದ್ದರೇ ಈ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಜನ ಅಸಮಾಧಾನ ವ್ಯಕ್ತಪಡಿಸಿದರು.

ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here