ಗದಗ ಸಮೀಪ ಚಿರತೆ ಪ್ರತ್ಯಕ್ಷ; ಸಾರ್ವಜನಿಕರ, ಪ್ರಯಾಣಿಕರ ಆತಂಕ, ಅರಣ್ಯ ಇಲಾಖೆ ಅಧಿಕಾರಿಗಳ ಶೋಧ ಕಾರ್ಯಾಚರಣೆ

0
Spread the love

ಇನ್ನೂ ಪತ್ತೆಯಾಗದ ಚಿರತೆ……

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಸಮೀಪದ ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ತೀವ್ರ ಆತಂಕ ಮೂಡಿಸಿದೆ.

ಭಾನುವಾರ ರಾತ್ರಿ 10:30ರ ಸುಮಾರು ಈ ಚಿರತೆ ಆರಾಮದಾಯಕವಾಗಿ ವಿಶ್ರಾಂತಿ ರೀತಿಯಲ್ಲಿ ಕಂಡು ಬಂದಿದ್ದು, ಕಾರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಈ ವಿಡಿಯೋ ಮಾಡಿದ್ದು, ಕ್ಷಣ ಮಾತ್ರದಲ್ಲಿ ವೈರಲ್ ಆಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಚಿರತೆ ಸಮೀಪವೇ ಬಸ್ ಹೋದರೆ , ಬೈಕ್ ಸವಾರರು ಪ್ರಯಾಣಿಸಿದ್ದು ಸ್ವಲ್ಪದರಲ್ಲೇ ಪಾರಾದರು.

ಈ ವಿಡಿಯೋ ವೈರಲ್ ಆಗಿದ್ದೇ ತಡ ಜನರು ಕುತೂಹಲದಿಂದ ಬೈಪಾಸ್ ಬಳಿ ಜಮಾಯಿಸಿದ್ದಾರೆ.

ಇನ್ನೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಬೀಡಾರ ಹೂಡಿದ್ದಾರೆ.

ಬಿಂಕದಕಟ್ಟಿ, ಅಸುಂಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರು ಮನೆಯಿಂದ ಹೊರಗೆ ಬರದಂತೆ ಮೈಕನಲ್ಲಿ ಎಚ್ಚರಿಕೆ ನೀಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಬೆಳಗಿನ ಜಾವ ಸಾರ್ವಜನಿಕರು ಮತ್ತಷ್ಟು ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ.

ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಎಮ್ ಆರ್ ಮೇಗಲಮನಿ ಹಾಗೂ ರಾಮಪ್ಪ ಪೂಜಾರ, ಸಿಬ್ಬಂದಿಗಳಾದ ಆರ, ವೈ, ಕಂಬಳಿ, ಬಿ. ಜಿ ಅಂಗಡಿ ಸೇರಿದಂತೆ ಅನೇಕರು ಇದ್ದರು.


Spread the love

LEAVE A REPLY

Please enter your comment!
Please enter your name here