ನಿಂರಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ……..
ವಿಜಯಸಾಕ್ಷಿ ಸುದ್ದಿ, ಗದಗ
ನಿಂತಿದ್ದ ಲಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾತ್ರಿ ನಡೆದಿದೆ.
ಸಮೀಪದ ಲಕ್ಷ್ಮೇಶ್ವರ ರಸ್ತೆಯ ಹುಬ್ಬಳ್ಳಿ -ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ (ಬೈಪಾಸ್) ಈ ಘಟನೆ ನಡೆದಿದ್ದು, ಕ್ಯಾಂಟರ್ ಚಾಲಕ ರಘು ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕ್ಲೀನರ್ ನಾಗಣ್ಣ ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತಪಟ್ಟ ಚಾಲಕ ಹಾಗೂ ಗಾಯಾಳು ಕ್ಲೀನರ್ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯ ಟೈರ್ ಬ್ಲಾಸ್ಟ್ ಆಗಿ ನಿಂತಿತ್ತು ಎನ್ನಲಾಗಿದೆ. ವೇಗವಾಗಿ ಹೊರಟಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳು ಕ್ಲೀನರ್ ನಾಗಣ್ಣ ಕ್ಯಾಂಟರ್ ನಲ್ಲಿ ಸಿಲುಕಿಕೊಂಡಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಆತನನ್ನು ಹೊರಗೆ ತಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ತರಕಾರಿ ತುಂಬಿದ್ದ ಕ್ಯಾಂಟರ್ ಧಾರವಾಡದಿಂದ ಆಂಧ್ರಪ್ರದೇಶಕ್ಕೆ ಹೊರಟಿತ್ತು ಎನ್ನಲಾಗಿದೆ.
ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.