ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

0
Spread the love

ಚಾಲಕನ ನಿಯಂತ್ರಣ ತಪ್ಪಿ ನಡೆದ ದುರಂತ…..

Advertisement

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಗದಗ ರಸ್ತೆಯ ಬನ್ನಿಕೊಪ್ಪ ಬಳಿ ನಡೆದಿದೆ.

ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದ ಅಪಘಾತದಲ್ಲಿ ತೆಲಂಗಾಣದ ನಾಲ್ವರು ಮೃತಪಟ್ಟಿದ್ದಾರೆ.

ತೆಲಂಗಾಣ ಮೂಲದ ಶಣ್ಮುಖ (28), ವೆನಿಲಾ ವರುದಿನಿ (18) ಹಾಗೂ ಮುಪ್ಪಿದು ರೂಪವತಿ (23) ಎಂಬುವರು ಮೃತಪಟ್ಟವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನೊಬ್ಬರ ಹೆಸರು ಸದ್ಯಕ್ಕೆ ತಿಳಿದು ಬಂದಿಲ್ಲ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಹಾಗಿದ್ದು, ಟೈಯರ್ ಸಮೇತ ಆ ಭಾಗ ಕಿತ್ತುಕೊಂಡು ಹೊರ ಬಂದಿದೆ. ಶವ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here