ಅಪಘಾತದ ಸುದ್ದಿ ತಿಳಿದು ಸ್ಥಳೀಯರಿಂದ ಪ್ರತಿಭಟನೆ, ಆಕ್ರೋಶ…
ವಿಜಯಸಾಕ್ಷಿ ಸುದ್ದಿ, ಹಾವೇರಿ
ರಸ್ತೆ ಪಕ್ಕದಲ್ಲಿ ನಿಂತವರ ಮೇಲೆ ಕಾರ್ ಹರಿದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಜರುಗಿದೆ.
ಇದನ್ನೂ ಓದಿ ಖಾಸಗಿ ಬಸ್ಸಿನ ಲಗೇಜ್ ಬಾಕ್ಸ್ ನ ಡೋರ್ ಬೈಕ್ ಗೆ ತಾಗಿ ಅಪಘಾತ; ಸ್ಥಳದಲ್ಲಿಯೇ ವಿದ್ಯಾರ್ಥಿ ಸಾವು, ಮತ್ತೊಬ್ಬರಿಗೆ ಗಾಯ
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದ ಈ ದುರ್ಘಟನೆಯಲ್ಲಿ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ಚಿದಾನಂದ ಹಾಗೂ ವಿರೂಪಾಕ್ಷಪ್ಪ ಎಂಬುವರು ಮೃತಪಟ್ಟಿದ್ದಾರೆ.

ಶಿಗ್ಗಾವಿ ಪಟ್ಟಣಕ್ಕೆ ಹೋಗಲು ವಾಹನಕ್ಕೆ ಕಾಯುತ್ತಿದ್ದಾಗ ಏಕಾಏಕಿ ಹಾವೇರಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲದೆ ಅಪಘಾತ ಪಡಿಸಿದ ಕಾರ್ ಪರಾರಿಯಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಶಿಗ್ಗಾವಿ ಪೊಲೀಸರು ಚಾಲಕನನ್ನು ಅರ್ಧ ಗಂಟೆಯಲ್ಲಿಯೇ ಬಂಧಿಸಿದ್ದಾರೆ.
ಇದನ್ನೂ ಓದಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟಕ್ಕೆ ಯತ್ನ; ಸಿಕ್ಕಿಬಿದ್ದ ಎಂಟು ಜನರ ಗ್ಯಾಂಗ್ …! ಆರು ಜನರ ಬಂಧನ- ಎಸ್ಪಿ

ಕಾರು ಬೆಳಗಾವಿ ಮೂಲದ್ದು ಎಂದು ಪೊಲೀಸರು ತಿಳಿಸಿದ್ದು, ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಜಮಾವಣೆಗೊಂಡು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ ಹಣಕಾಸಿನ ವಿಚಾರ; ಮಾರಕಾಸ್ತ್ರಗಳಿಂದ ಹೊಡೆದಾಟ; ಏಳು ಜನರಿಗೆ ಗಾಯ, ಹೊಡೆದಾಟದ ವಿಡಿಯೋ ವೈರಲ್…!
ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.