ಗದಗ ಜಿಲ್ಲೆಯ ಪೊಲೀಸರ ಭರ್ಜರಿ ಕಾರ್ಯಾಚರಣೆ; ಕಂತೆ ಕಂತೆ ಹಣ ಜಪ್ತಿ, ನರಸಿಂಗಸಾ ತಂಬಾಕು ಸೀಜ್

0
Spread the love

ಗದಗ, ಮುಂಡರಗಿ ಹಾಗೂ ಶಿರಹಟ್ಟಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ನಾಲ್ವರು ‌ವಶಕ್ಕೆ

Advertisement

ವಿಜಯಸಾಕ್ಷಿ ಸುದ್ದಿ, ಗದಗ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. ಎಸ್ಪಿ ಬಿ. ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ವಿವಿಧ ಚೆಕ್ ಪೋಸ್ಟ್ ಸಿಬ್ಬಂದಿಯ ಚಾಣಾಕ್ಷತನದಿಂದ ಲಕ್ಷಾಂತರ ರೂ.ಮೌಲ್ಯದ ತಂಬಾಕು ಹಾಗೂ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕಂತೆ ಕಂತೆ ಹಣ ಸಿಕ್ಕಿದೆ.

ಗದಗ ಶಹರದ ಮುಳಗುಂದ ರಸ್ತೆಯಲ್ಲಿ ಇರುವ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 15 ಲಕ್ಷ ರೂ. ಗಳು ಪತ್ತೆಯಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹುಲಗೂರಿನಿಂದ ದೇವದುರ್ಗಕ್ಕೆ ಹೊರಟಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು ವಿಶೇಷವಾಗಿದೆ.

ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನೊಂದು ಪ್ರಕರಣದಲ್ಲಿ ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಸುಪ್ರಸಿದ್ಧ ತಂಬಾಕು ಸಿಕ್ಕಿದೆ.

ಗದಗನಿಂದ ಮುಂಡರಗಿ ಮಾರ್ಗವಾಗಿ ಕೊಪ್ಪಳ ಜಿಲ್ಲೆಯ ಕಡೆ ಹೊರಟಿದ್ದ ಗೂಡ್ಸ್ ವಾಹನದಲ್ಲಿ ಸೂಕ್ತ ದಾಖಲೆ ಇಲ್ಲದೇ 1ಲಕ್ಷ 84 ಸಾವಿರ ರೂ.ಮೌಲ್ಯದ ತಂಬಾಕು ಜಪ್ತಿ ಮಾಡಲಾಗಿದ್ದು, ಶಿರಾಜ್ ನಾಗರಕಟ್ಟಿ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚೆಕ್ ಪೋಸ್ಟ್ ನಲ್ಲಿ ಕೂಡ 1ಲಕ್ಷ 10 ಸಾವಿರ ರೂ. ಮೌಲ್ಯದ ತಂಬಾಕು ಸಿಕ್ಕಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಿಂದ ಶಿರಹಟ್ಟಿ ಕಡೆ ಈ ತಂಬಾಕು ತುಂಬಿದ ರಿಕ್ಷಾ ಬರುತ್ತಿತ್ತು ಎನ್ನಲಾಗಿದೆ. ಶ್ಯಾಮ್ ನವಲೆ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಯುತ್ತಿದೆ.

ಗದಗ ಎಸ್ಪಿ ಬಿ. ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.


Spread the love

LEAVE A REPLY

Please enter your comment!
Please enter your name here