ಲೋಕಾಯುಕ್ತ ಅಧಿಕಾರಿಗಳ ದಾಳಿ; ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಬಲೆಗೆ

0
Spread the love

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ

Advertisement

ಹಾಸ್ಟೆಲ್ ಗೆ ಸರಬರಾಜು ಮಾಡಿದ್ದ ವಸ್ತುಗಳಿಗೆ ಬಿಲ್ ಮಾಡಲು ಲಂಚ ಕೇಳಿದ್ದ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಎಫ್ ಡಿ ಎ ನರಸಿಂಹಮೂರ್ತಿ ಎಂಬಾತ, ಜಿಲ್ಲೆಯ ವಿವಿಧ ಹಾಸ್ಟೆಲ್ ಗಳಿಗೆ ವಸ್ತುಗಳನ್ನು ಸರಬರಾಜು ಮಾಡಿದ್ದ ಗುತ್ತಿಗೆದಾರ ಸಜ್ಜನಕೆರೆ ಗ್ರಾಮದ ಲೋಕೇಶ್ ಎಂಬುವವರ ಬಿಲ್ ಪಾವತಿ ಮಾಡಲು ಲಂಚ ಕೇಳಿದ್ದ.

ಗುರುವಾರ ಮಧ್ಯಾಹ್ನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ 11ಸಾವಿರ ರೂ. ಹಣ ಲಂಚ ಪಡೆಯುತ್ತಿದ್ದಾಗ, ಲೋಕಾಯುಕ್ತ ಡಿವೈಎಸ್ಪಿ ಜಿ. ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದು, ವಿಚಾರಣೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here