HomeCovid Updatesಶುಕ್ರವಾರ ಶತಕ ದಾಟಿದ ಸೋಂಕು; ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 110 ಜನರಿಗೆ ಕೊರೊನಾ

ಶುಕ್ರವಾರ ಶತಕ ದಾಟಿದ ಸೋಂಕು; ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 110 ಜನರಿಗೆ ಕೊರೊನಾ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಶುಕ್ರವಾರ ಒಂದೇ ದಿನ ಹೊಸದಾಗಿ ದಾಖಲೆಯ ಬರೋಬ್ಬರಿ 110 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 110 ಸೋಂಕಿತರ ಪೈಕಿ ಏಳು ಜನ ಶಿಕ್ಷಕರಿಗೆ, ಏಳು ಜನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಆತಂಕ ಸೃಷ್ಟಿಸಿದೆ.

ವಿದ್ಯಾದಾನ ಸಮಿತಿಯ ಬಾಲಕಿಯರ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ. ಹುಲಕೋಟಿಯ ರಾಜೇಶ್ವರಿ ಶಾಲೆಯ ಮೂವರು, ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಕೆಜಿಬಿವ್ಹಿ ಹಾಸ್ಟೆಲ್‌ನ ನಾಲ್ವರು ಹಾಗೂ ಗದಗನ ದೇವರಾಜು ಅರಸು ವಸತಿ ನಿಲಯದ ಓರ್ವ ವಿದ್ಯಾರ್ಥಿಗೆ ಸೋಂಕು ತಗುಲಿದೆ.

ಶುಕ್ರವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,02,440 ಮಾದರಿ ಸಂಗ್ರಹಿಸಿದ್ದು, 6,76,054 ನಕಾರಾತ್ಮಕವಾಗಿವೆ. ಶುಕ್ರವಾರದ 110 ಪ್ರಕರಣ ಸೇರಿ ಒಟ್ಟು 26,386 ಜನರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ ಸೋಂಕಿನಿಂದ 319 ಜನ ಮೃತಪಟ್ಟಿದ್ದಾರೆ. ಇಂದಿನ 9 ಜನ ಸೇರಿ ಒಟ್ಟು 25,784 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 283 ಸಕ್ರಿಯ ಪ್ರಕರಣಗಳಿವೆ.

ಒಟ್ಟು 283 ಸಕ್ರಿಯ ಪ್ರಕರಣಗಳ ಪೈಕಿ ಗದಗ ತಾಲ್ಲೂಕಿನಲ್ಲಿ 193, ಮುಂಡರಗಿ 40, ನರಗುಂದ 3, ರೋಣ 18 ಹಾಗೂ ಶಿರಹಟ್ಟಿ ತಾಲ್ಲೂಕಿನಲ್ಲಿ 29 ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!