ಜಿಮ್ಸ್ ಆಸ್ಪತ್ರೆಗೆ ದಾಖಲು
ವಿಜಯಸಾಕ್ಷಿ ಸುದ್ದಿ, ಮುಳಗುಂದ
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ಬಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜರುಗಿದೆ.
ಇಲ್ಲಿನ ಚಿಂದಿಪೇಟಿ ಓಣಿಯಲ್ಲಿ ಈ ಘಟನೆ ನಡೆದಿದ್ದು, ಬಸವಣ್ಣೆಪ್ಪ, ಯಶೋಧ ಹಾಗೂ ಬಾಲಕ ಆದರ್ಶ ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಚಾವಣಿ ಕಿತ್ತು ಹೋಗಿದ್ದು, ಅಡುಗೆ ಮನೆಯ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಸ್ಫೋಟದ ಸದ್ದು ಕೇಳಿದ ಅಕ್ಕಪಕ್ಕದ ಜನರು ಧಾವಿಸಿ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಮುಳಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.