HomeCrime Newsಕೊಲೆಗೆ ಪ್ರಯತ್ನಿಸಿದ ಆರೋಪಿತರಿಗೆ 7 ವರ್ಷ 9 ತಿಂಗಳು ಜೈಲು; 7,500 ರೂ. ದಂಡ

ಕೊಲೆಗೆ ಪ್ರಯತ್ನಿಸಿದ ಆರೋಪಿತರಿಗೆ 7 ವರ್ಷ 9 ತಿಂಗಳು ಜೈಲು; 7,500 ರೂ. ದಂಡ

Spread the love

ಕುಡಗೋಲನಿಂದ ಹಲ್ಲೆ ಮಾಡಿದ್ದ ಪ್ರಕರಣ……..

ವಿಜಯಸಾಕ್ಷಿ ಸುದ್ದಿ, ಗದಗ

ಕೊಲೆ ಮಾಡುವ ಉದ್ದೇಶದಿಂದ ವ್ಯಕ್ತಿಯೊಬ್ಬರ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂದಂಧಿಸಿದಂತೆ ಆರೋಪಿತರಿಬ್ಬರಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಪ್ರಕರಣದ ಆರೋಪಿತರಾದ ಬಸಪ್ಪ ಸಿದ್ದಪ್ಪ ಮಾದರ ಹಾಗೂ ಇನ್ನೊಬ್ಬ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಲಗೇರಿ ಗ್ರಾಮದ ಪಿರ್ಯಾದಿಯ ಮನೆಯ ಮುಂದೆ ಸಾರ್ವಜನಿಕ ರಸ್ತೆ ಮೇಲೆ 12-11-2014ರಂದು ರಾತ್ರಿ 8ಗಂಟೆಯ ಸುಮಾರಿಗೆ ಆರೋಪಿ ಬಸಪ್ಪ ಬೈದಾಡುತ್ತಾ ಕ್ಷುಲ್ಲಕ ಕಾರಣಕ್ಕಾಗಿ ತನ್ನ ಕೈಯಲ್ಲಿದ್ದ ಕುಡಗೋಲಿನಿಂದ ಕೊಲೆ ಮಾಡುವ ಉದ್ದೇಶದಿಂದ ಹೊಡೆದು ಗಾಯಪಡಿಸಿದ್ದು, ಇನ್ನೊಬ್ಬ ಆರೋಪಿಯೂ ಕೂಡಿ ಕೊಲೆ ಮಾಡಲು ಪ್ರಯತ್ನ ಮಾಡಿದ ಅಪರಾಧದ ಕುರಿತು ಆರೋಪಿತರ ವಿರುದ್ಧ ನರಗುಂದ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಎಚ್.ಬಿ. ತಳವಾರ ತನಿಖೆಯನ್ನು ಪೂರೈಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸಾಕ್ಷಿ ವಿಚಾರಣೆ ನಡೆಸಿದ ಗದಗಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜರು ಸದರ ಪ್ರಕರಣದಲ್ಲಿ ಆರೋಪ ರುಜುವಾತಾಗಿದ್ದರಿಂದ ಆರೋಪಿತರಾದ ಬಸಪ್ಪ ಸಿದ್ದಪ್ಪ ಮಾದರ ಹಾಗೂ ಇನ್ನೊಬ್ಬರಿಗೆ ಡಿ.23ರಂದು 7 ವರ್ಷ ಸಾದಾ ಕಾರವಾಸ ಶಿಕ್ಷೆ ಹಾಗೂ ತಲಾ ರೂ.7000 ದಂಡ, ಕಲಂ: 323 ಭಾದಂಸಂರಡಿ 9 ತಿಂಗಳ ಸಾದಾ ಕಾರಾವಾಸ ಶಿಕ್ಷೆ ಹಾಗೂ ತಲಾ ರೂ. 500 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕಿ ಸವಿತಾ.ಎಂ. ಶಿಗ್ಲಿ ವಾದ ಮಂಡಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!